ಯಕ್ಷಗಾನ ಕಲಾರಂಗದ ದಾನಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪ್ರೊ. ಕೃಷ್ಣಮೂರ್ತಿ (66 ವರ್ಷ) ಇಂದು (10-06-2021) ಶಿರ್ವದ ಮನೆಯಲ್ಲಿ ನಿಧನಹೊಂದಿದರು. ವಿದ್ಯಾರ್ಥಿಗಳ ಬಗ್ಗೆ ಅತೀವ ಪ್ರೀತಿ ಕಾಳಜಿ ಹೊಂದಿದ್ದ ಇವರು ವಿದ್ಯಾಪೋಷಕ್ ಗೆ ತಾವು ನಿವೃತ್ತಿ ಹೊಂದುವ ಸಂದರ್ಭದಲ್ಲಿ ದೊಡ್ಡಮೊತ್ತದ ನೆರವು ನೀಡಿದ್ದರು. ಇವರು ಪತ್ನಿ ಹಾಗೂ ಅಪಾರ ವಿದ್ಯಾರ್ಥಿ ಮಿತ್ರರನ್ನು ಆಗಲಿದ್ದಾರೆ. ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

error: Content is protected !!
Share This