ಏರ್ಯಲಕ್ಷೀನಾರಾಯಣ ಆಳ್ವ

ಹಿರಿಯ ಸಾಹಿತಿ ಏರ್ಯಲಕ್ಷೀನಾರಾಯಣ ಆಳ್ವ(94)ಅವರು ಹೃದಯಘಾತದಿಂದ ಇಂದು ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ.

ಏರ್ಯಬೀಡು ಅವರ ಸ್ವಗೃಹದಲ್ಲಿ ಸಂಜೆಯ ವೇಳೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಅಂಕಣಕಾರರಾಗಿ, ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರಾಗಿ,ಅನೇಕ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳ ರೂವಾರಿಯಾಗಿ , ಸಾಹಿತ್ಯ ದಲ್ಲಿ ವಿಶೇಷ ಸಾಧನೆಗೈದ ಹಿರಿಯ ಚೇತನ ಲಕ್ಷೀನಾರಾಯಣ ಆಳ್ವ ಅವರು ಆರೋಗ್ಯವಾಗಿಯೇ ಇದ್ದರು.

ಸಂಜೆಯ ವೇಳೆ ಅವರು ಮನೆಯಲ್ಲಿದ್ದಾಗ ಇದ್ದ ಕ್ಕಿಂತೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆ ಗೆ ಕೊಂಡೊಯ್ಯಲಾಯಿತು. ಅದರೆ ಅವರು ಚಿಕಿತ್ಸೆ ಗೆ ಸ್ಪಂದಿಸದೆ ಹೃದಯಾಘಾತದಿಂದ ನಿಧನರಾದರು ಎಂದು ಅವರು ಸಂಬಂಧಿಕರು ತಿಳಿಸಿದ್ದಾರೆ.

ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರ ನಿಕಟವರ್ತಿ ಯಾಗಿ ಅಲ್ಲಿನ ಎಲ್ಲಾ ಕಾರ್ಯಕ್ರಮ ಗಳಲ್ಲಿ ಇವರು ಭಾಗಿಯಾಗುತ್ತಿದ್ದರು. ಬಂಟ್ವಾಳ ದಲ್ಲಿ ಏರ್ಯಲಕ್ಮೀನಾರಾಯಣ ಅಳ್ವ ಅವರ ನೇತ್ರತ್ವದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಗಳಲ್ಲಿ ಹೆಗ್ಗಡೆ ಯವರು ಪಾಲ್ಗೊಳ್ಳುತ್ತಿದ್ದರು. ಏರ್ಯ ಅವರು ಪತ್ನಿ ಹಾಗೂ ಮಗಳು ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

error: Content is protected !!
Share This